Wednesday, 30 January 2019

ದೀಪದ ಗಿಡ


ಇಷ್ಟು ದೂರ ನಡೆದು ಬಂದಿದ್ದೇನೆ
ಹಾದಿಯಲ್ಲಿ ಮೂಡಿದ ಹೆಜ್ಜೆಗಳಷ್ಟೇ ನನ್ನ ಪರಿಚಯ

ಬರೆವ ಎರಡು ಸಾಲು ಕವಿತೆಯಾಗಿಸದೆ ಹೋದರೆ
ಕವಿಯೇ, ನೂರು ಸಾಲು ಬರೆದರೂ ಕವಿತೆ ಹುಟ್ಟದು

ಗುಡುಗಿನ ಮೊದಲೂ ಮೌನ ನಂತರವೂ...
ಲೋಕದ ಕಿವಿಯಲಿ ಕೊನೆತನಕ ಗುಡುಗಿನ ಸದ್ದಷ್ಟೇ ಉಳಿಯಿತು

ಈಜಲು ವಿಶಾಲ ಸಮುದ್ರವಿದೆಯೆಂದು ಮೀನು ತುಸು ಮೇಲೆದ್ದಿತು
ನೂರಾರು ಗಾವುದ ದೂರದ ಹದ್ದಿನ ಕಣ್ಣಿಗೆ ಅಷ್ಟು ಸಾಕಿತ್ತು

ಮನ್ನಿಸು, ಹೂಗಳನ್ನಲ್ಲ ನಿನ್ನ ಸಮಾಧಿಯ ಮೇಲೆ ಬರಿ ಅಕ್ಷರಗಳನಿಟ್ಟೆ
ಓದಿದವರ ಎದೆಯಲ್ಲಿ ಅಕ್ಷರಗಳು ನಿನಗೆ ಮರುಹುಟ್ಟು ಕೊಟ್ಟವು

ಹಗಲೇ ಇರುಳಿಗೆ ಜಾರಿ ಬಂದಂತಿದೆ
ಕತ್ತಲೆಯಲ್ಲಿ ಸಣ್ಣ ದೀಪಕ್ಕೂ ಉರಿವ ಸೂರ್ಯನಷ್ಟೇ ಜಂಬ

ಹಣತೆ ಹಚ್ಚಿಟ್ಟ ಮೇಲೂ ಎದುರಿನ ಮುಖ ಕಾಣಲಿಲ್ಲವಾದರೆ
ದೋಷ ಎಲ್ಲಿಯದೆಂದು ಈಗಲಾದರೂ ಹುಡುಕು


- ಬಸೂ

No comments:

Post a Comment

ಎತ್ತಿತೋರಿಸಲಾದ ಪೋಸ್ಟ್

ಅನ್ನಮ್ಮ’ಳಿಗೆ ೨೫೦ರ ಹಾಗೂ ಅತಿ.ವಂ.ಪೊತ್ತಕಮೂರಿಗೆ ೫೦ರ ಸ್ಮರಣೆಯ ಸಂಭ್ರಮ

ಬೆಂಗಳೂರಿನ ಉತ್ತರಹಳ್ಳಿಯ ಅನ್ನಮ್ಮನ ಬೆಟ್ಟ, ಅಲ್ಲಿನ ಅನ್ನಮ್ಮಳ ಸಮಾಧಿ, ಆ ಬೆಟ್ಟದ ಮೇಲಿನ ಶಿಲುಬೆ, ಅಲ್ಲಿ ಪ್ರತಿವರ್ಷ ತಪಸ್ಸು ಕಾಲದ ಐದನೇ ಭಾನುವಾರ ನಡೆಯುವ ಯೇಸು...