Wednesday, 15 January 2020

ಕಥಾದನಿ

- ಇನ್ನಾ
ಮೆಡಿಟೇಶನ್
ಒಬ್ಬ ಝೆನ್ ಮಾಸ್ಟರ್ ಗೆ ಇಬ್ಬರು ಶಿಷ್ಯರಿದ್ದರು. ಪ್ರತಿದಿನ ಅವರಿಬ್ಬರೂ ಮಾಸ್ಟರ್ ಮನೆಯ ಮುಂದಿನ ಗಾರ್ಡನ್ ನಲ್ಲಿ `ವಾಕಿಂಗ್ ಮೆಡಿಟೇಶನ್' ಮಾಡುತ್ತಿದ್ದರು. ಝೆನ್ ಸಂಪ್ರದಾಯದಲ್ಲಿ ಪ್ರತಿ ಕ್ರಿಯೆಯೂ ಧ್ಯಾನವೇ. ಸದಾ 24 ಗಂಟೆ ಕುಳಿತು ಧ್ಯಾನ ಮಾಡುವುದು ಕಷ್ಟ. ಕಾಲುಗಳು ಮರಗಟ್ಟುತ್ತವೆ, ರಕ್ತದ ಚಲನೆಗೆ ತೊಂದರೆಯಾಗುತ್ತದೆ. ಆದ್ದರಿಂದ ಝೆನ್ ಸನ್ಯಾಸಿಗಳು ಸ್ವಲ್ಪ ಹೊತ್ತು ಕೂತು ಧ್ಯಾನ ಮಾಡುತ್ತಾರೆ ಆಮೇಲೆ ಸ್ವಲ್ಪ ಹೊತ್ತು ನಡೆದಾಡುತ್ತ ಧ್ಯಾನ ಮಾಡುತ್ತಾರೆ.
ಮಾಸ್ಟರ್‍ನ   ಈ ಶಿಷ್ಯರಿಬ್ಬರಿಗೂ ಹೊಗೆಸೊಪ್ಪು ಸೇದುವ ಚಟ ಆದರೆ ಅವರಿಬ್ಬರೂ ಮಾಸ್ಟರ್ ಗೆ ಹೆದರಿ ಗಾರ್ಸನ್ನಲ್ಲಿ ಹೊಗೆಸೊಪ್ಪು ಸೇದುತ್ತಿರಲಿಲ್ಲ. ಒಂದು ದಿನ ಶಿಷ್ಯರಿಬ್ಬರೂ ಪ್ರತ್ಯೇಕವಾಗಿ ಮಾಸ್ಚರ್ ಬಳಿ ಹೋಗಿ ಗಾರ್ಸನ್ನಲ್ಲಿ ವಾಕಿಂಗ್ ಮೆಡಿಟೇಶನ್ ಮಾಡುವಾಗ ಹೊಗೆ ಸೊಪ್ಪು ಸೇದಲು ಮಾಸ್ಟರ್‍ನ ಅನುಮತಿ ಕೇಳಲು ನಿರ್ಧರಿಸಿದರು.
ಮರುದಿನ ಒಬ್ಬ ಶಿಷ್ಯ ಗಾರ್ಸನ್ನಲ್ಲಿ ಹೊಗೆಸೊಪ್ಪು ಸೇದುತ್ತ ನಡೆದಾಡುತ್ತಿರುವುದನ್ನು ಕಂಡು ಇನ್ನೊಬ್ಬ ಶಿಷ್ಯನಿಗೆ ಸಿಟ್ಟು ಬಂತು. ``ನಾನೂ ಅನುಮತಿ ಕೇಳಿದೆ ಆದರೆ ಮಾಸ್ಟರ್ ನಿರಾಕರಿಸಿಬಿಟ್ಟರು. ನಿನಗೆ ಹೇಗೆ ಒಪ್ಪಿಗೆ ಕೊಟ್ಟರು? ನಾನು ಈಗಲೇ ಮಾಸ್ಟರ್ ಬಳಿ ಹೋಗುತ್ತೇನೆ'' ಅವ ಸಿಟ್ಟಿನಿಂದ ಹೇಳಿದ.
``ನಿಲ್ಲು ನಿಲ್ಲು, ನೀನು ಮಾಸ್ಟರ್‍ನ ಏನಂತ ಕೇಳಿದೆ?'' ಮೊದಲ ಶಿಷ್ಯ ಕೇಳಿದ.
``ವಾಕಿಂಗ್ ಮೆಡಿಟೇಶನ್ ಮಾಡುವಾಗ ಹೊಗೆಸೊಪ್ಪು ಸೇದಲೆ? ಎಂದು ಕೇಳಿದೆ'' ಎರಡನೆಯವ ಉತ್ತರಿಸಿದ.
``ಅದೇ ನೋಡು ನೀನು ಮಾಡಿದ ತಪ್ಪು. ಹಾಗಲ್ಲ ಕೇಳೋದು. ಹೊಗೆಸೊಪ್ಪು ಸೇದುವಾಗ ವಾಕಿಂಗ್ ಮೆಡಿಟೇಶನ್ ಮಾಡಬಹುದಾ ಅಂತ ಕೇಳಬೇಕಿತ್ತು. ನಾನು ಹಾಗೆ ಕೇಳಿದೆ'' ಮೊದಲ ಶಿಷ್ಯ ನಕ್ಕು ಬಿಟ್ಟ.

ನನ್ನ ಗುರು ಅದೆಷ್ಟು ಬುದ್ಧಿವಂತನೆಂದರೆ, ಹಸಿವಾದಾಗ ತಿನ್ನುತ್ತಾನೆ ಮತ್ತು ಸುಸ್ತಾದಾಗ ಮಲಗುತ್ತಾನೆ ಹಾಗೂ ಅಗತ್ಯವಿದ್ದಾಗ ಮಾತನಾಡುತ್ತಾನೆ.
ಬೌದ್ಧ ಬಿಕ್ಕುಗಳ ಗುಂಪು ಒಂದು ಊರಿನಿಂದ ಇನ್ನೊಂದು ಊರಿಗೆ ಸುತ್ತಾಡುತ್ತಿರುತ್ತವೆ. ಒಮ್ಮೆ ಇಂತಹ ಬಿಕ್ಕುಗಳ ಅನೇಕ ಗುಂಪುಗಳು, ನಾಲ್ಕು ರಸ್ತೆಗಳು ಸೇರುವ ಊರೊಂದರಲ್ಲಿ ತಂಗಿದ್ದವು. ಬೇರೆ ಬೇರೆ ಗುಂಪಿನ ನಾಲ್ಕು ಜನ ಶಿಷ್ಯ ಸನ್ಯಾಸಿಗಳು ತಮ್ಮ ನಡುವೆ ತಮ್ಮ ಅನುಭವಗಳ ಬಗ್ಗೆ ಚರ್ಚಿಸುತ್ತಿದ್ದರು. ಆ ಮಧ್ಯೆ ಅವರ ಮಾತು ಯಾರ ಗುರು ಹೆಚ್ಚು ಶ್ರೇಷ್ಠ ಮತ್ತು ಉತ್ತಮ? ಎಂಬುದರ ಕುರಿತು ಹೊರಳಿತು. ಒಬ್ಬ ಶಿಷ್ಯ ಹೇಳಿದ, ನನ್ನ ಗುರು ಎಷ್ಟು ಶಕ್ತಿಶಾಲಿಯೆಂದರೆ, ನಾಲ್ಕು ದಿನಗಳ ಹಿಂದೆ ನಮ್ಮ ಗುಂಪನ್ನು ಡಕಾಯಿತರು ಸುತ್ತುವರಿದಾಗ, ಕೇವಲ ತನ್ನ ಕಣ್ಸನ್ನೆಯಿಂದಲೇ ಎಲ್ಲರನ್ನೂ ಹಿಮ್ಮೆಟ್ಟಿಸಿದ.
ಇನ್ನೊಬ್ಬ ಶಿಷ್ಯ, ನನ್ನ ಗುರು ಝೆನ್ ಮಾತ್ರವಲ್ಲ, ರಕ್ಷಣಾ ವಿದ್ಯೆಯಲ್ಲಿ ಕೂಡ ಪಾರಂಗತ. ನಲ್ವತ್ತು ಜನರೊಂದಿಗೆ ಕತ್ತಿಹಿಡಿದು ಹೋರಾಡುವಾಗಲೇ, ಇನ್ನೂ ಇಪ್ಪತ್ತು ಜನರನ್ನು ವಾದದಲ್ಲಿ ಮಣಿಸಬಲ್ಲ ಎಂದ.
ಮೂರನೆಯ ಶಿಷ್ಯ ಹೇಳಿದ, ನನ್ನ ಗುರುವಿಗೆ ಇರುವಷ್ಟು ನಿಯಂತ್ರಣ ಶಕ್ತಿ ನಿಮ್ಮಲ್ಲಿ ಯಾರ ಗುರುವಿಗೂ ಇದ್ದಂತಿಲ್ಲ. ಆತ ದಿನವಿಡೀ ನಿದ್ದೆಮಾಡದೇ, ಆಹಾರ ಸೇವಿಸದೇ ಇರಬಲ್ಲ. ಕೊನೆಯ ಶಿಷ್ಯ ಹೇಳಿದ, ನನ್ನ ಗುರು ಅದೆಷ್ಟು ಬುದ್ಧಿವಂತನೆಂದರೆ, ಹಸಿವಾದಾಗ ತಿನ್ನುತ್ತಾನೆ ಮತ್ತು ಸುಸ್ತಾದಾಗ ಮಲಗುತ್ತಾನೆ ಹಾಗೂ ಅಗತ್ಯವಿದ್ದಾಗ ಮಾತನಾಡುತ್ತಾನೆ.
-0--0--0--0--0--0-

No comments:

Post a Comment

ಎತ್ತಿತೋರಿಸಲಾದ ಪೋಸ್ಟ್

ಅನ್ನಮ್ಮ’ಳಿಗೆ ೨೫೦ರ ಹಾಗೂ ಅತಿ.ವಂ.ಪೊತ್ತಕಮೂರಿಗೆ ೫೦ರ ಸ್ಮರಣೆಯ ಸಂಭ್ರಮ

ಬೆಂಗಳೂರಿನ ಉತ್ತರಹಳ್ಳಿಯ ಅನ್ನಮ್ಮನ ಬೆಟ್ಟ, ಅಲ್ಲಿನ ಅನ್ನಮ್ಮಳ ಸಮಾಧಿ, ಆ ಬೆಟ್ಟದ ಮೇಲಿನ ಶಿಲುಬೆ, ಅಲ್ಲಿ ಪ್ರತಿವರ್ಷ ತಪಸ್ಸು ಕಾಲದ ಐದನೇ ಭಾನುವಾರ ನಡೆಯುವ ಯೇಸು...