Saturday, 9 May 2020

ಓದಿದ ಪುಸ್ತಕಗಳಿಂದ


 

ನನ್ನ ಪಾಡಿಗೆ ನನ್ನನ್ನು ಬಿಟ್ಟರೆ ತಿಂಗಳುಗಟ್ಟಲೆ ಅಥವಾ ಜೀವನ ಪರ್ಯಂತ ಬೇಕಾದರೂ ಇದ್ದೇನು. ಆದರೆ ನೀನು ಇಲ್ಲೆ ಇರಬೇಕು. ಎಲ್ಲಿಯೂ ಹೋಗುವಂತೆಯೇ ಇಲ್ಲ ಎಂದು ಯಾರಾದರೂ ಅಂದರೆ ಅಲ್ಲಿಗೆ ಮುಗಿಯಿತು ನನ್ನ ಕಥೆ. ಅನಂತರ ಅಲ್ಲಿ ಕಳೆಯುವ ಪ್ರತಿಯೊಂದು ಕ್ಷಣವೂ ನನಗೆ ಭೀಕರವಾಗುತ್ತದೆ.”

 ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಅಲೆಮಾರಿಯ ಅಂಡಮಾನ್, ಪುಟ 108

 

ನನಗೆ ನಿಜವಾಗಿಯೂ ನಮ್ಮ ಸ್ವಾತಂತ್ರ್ಯದ ಅಮೂಲ್ಯತೆಯ ಬಗ್ಗೆ ಅರಿವು, ಅಭಿಮಾನ ಮೂಡುವುದು ಮಹಾ ಯುದ್ಧದ ಮತ್ತು ಅನಂತರ ಕಮ್ಯುನಿಸ್ಟ್ ರಾಷ್ಟ್ರಗಳಲ್ಲಿ ನಡೆದ ಕಡ್ಡಾಯ ಶ್ರಮಶಿಬಿರಗಳ ಕತೆಗಳನ್ನು ಕೇಳಿದಾಗ, ಮತ್ತು ಓದಿದಾಗ. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣವಾಗಿಟ್ಟು ಅಲ್ಲಿಂದ ಹೇಗಾದರೂ ಮಾಡಿ ಗಡಿ ದಾಟಿ ಸ್ವಾತಂತ್ರ್ಯದ ಉಸಿರಾಡಲು ತವಕಿಸಿದವರ ಕತೆಗಳನ್ನು ಓದುವಾಗ, ಬಡತನ, ಅನಕ್ಷರತೆ ಇತ್ಯಾದಿ ಪರಿಹಾರ ಸಾಧ್ಯವಾದ ಸಮಸ್ಯೆಗಳಿಗೆ ನಾವು ನಮ್ಮ ಸ್ವಾತಂತ್ರ್ಯವನ್ನೇ ಒತ್ತೆಯಿಡಲು ತಯ್ಯಾರಾಗುವುದು ಅಕ್ಷಮ್ಯ ಎಂದೆನಿಸುತ್ತದೆ.”

 ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಮುನ್ನುಡಿ, ಮಹಾಯುದ್ಧ-2

 

ಈ ಶತಮಾನದ ಅದ್ಭುತಗಳಾಗಿ ಎವರೆಸ್ಟ್ ಹತ್ತಿದ್ದು, ಉಪಗ್ರಹ ಹಾರಿಸಿದ್ದು, ಚಂದ್ರನಲ್ಲಿ ಇಳಿದಿದ್ದು, ಕಂಪ್ಯೂಟರ್ ಚಿಪ್ ಗಳನ್ನು ತಯಾರಿಸಿದ್ದು ಕಣ್ಣು ಕೋರೈಸುವ ಸಾಧನೆಗಳಾದ್ದರಿಂದ ಜನಪ್ರಿಯತೆಯನ್ನೂ ಪ್ರಚಾರವನ್ನೂ ಪಡೆದುಕೊಳ್ಳುತ್ತವೆ. ಆದರೆ ಈ ಶತಮಾನದ ಸಾಧನೆ ಎಂದು ಯಾವುದಾದರೂ ಒಂದೇ ಒಂದು ಸಾಧನೆಯನ್ನು ಹೇಳು ಎಂದು ನನ್ನನ್ನು ಯಾರಾದರೂ ಕೇಳಿದರೆ ನಾನು ನಿಸ್ಸಂಶಯವಾಗಿ ವಿಶ್ವ ಆರೋಗ್ಯ ಸಂಸ್ಥೆ ಸಿಡುಬನ್ನು ಈ ಭೂಮಂಡಲದಿಂದಲೇ ಉಚ್ಚಾಟಿಸಿದ್ದು ಎಂದು ನಾನು ಹೇಳುತ್ತೇನೆ. ಇದು ಇದ್ದಕ್ಕಿದಂತೆ ಧಢೀರೆಂದು ಯಾರೋ ಒಬ್ಬ ಸಹಸ್ರಾರು ಜನರ ಸಮ್ಮುಖದಲ್ಲಿ ಸಾಧಿಸಿ ಚಪ್ಪಾಳೆ ಗಿಟ್ಟಿಸಿದಂಥ ಸಾಧನೆಯಲ್ಲ! ನೂರಾರು ದೇಶಗಳ ಸಹಸ್ರಾರು ಕಾರ್ಯಕರ್ತರು ಮಳೆ ಬಿಸಿಲೆನ್ನದೇ, ಕಗ್ಗಾಡು ಮರಳುಗಾಡೆನ್ನದೇ ಅನೇಕ ವರ್ಷಗಳ ಪರ್ಯಂತ ಕೆಲಸ ಮಾಡಿ ಸಾಧಿಸಿದ ಯಶಸ್ಸು. ನಾಗರೀಕತೆಗಳ ಹುಟ್ಟಿನಿಂದಲೂ ಸತತವಾಗಿ ಸಾವಿರಾರು ಜನಗಳನ್ನು ಬಲಿ ತೆಗೆದುಕೊಂಡ, ವಿರೂಪಗೊಳಿಸಿದ, ಕುರುಡರನ್ನಾಗಿ ಮಾಡಿದ ಈ ಮಹಾಮಾರಿಯಿಂದ ಮನುಕುಲವನ್ನೇ ವಿಮುಕ್ತಿಗೊಳಿಸಿದ್ದು ಈ ಶತಮಾನದ ಮನುಷ್ಯ ಸದ್ದುಗದ್ದಲವಿಲ್ಲದೆ ಸಾಧಿಸಿದ ಆತ್ಯಮೋಘ ಸಾಧನೆ. ಈ ಸಾಧನೆಯಿಂದ ಹಿಂದುಳಿದ ರಾಷ್ಟ್ರಗಳ ಕೋಟ್ಯಂತರ ದೀನರ ಬಡವರ ಆಹುತಿ ತಪ್ಪಿತು. ಇದಕ್ಕಿಂತ ಹೆಚ್ಚಾಗಿ ಇಡೀ ಮನುಕುಲಕ್ಕೆ ಇದರಿಂದ ಒದಗಿದ ಆತ್ಮವಿಶ್ವಾಸಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ”

- ಕೆ.ಪಿ.ಪೂರ್ಣಚಂದ್ರ ತೇಜಸ್ವಿ

ಉಚಾಲ್ಯಾ ಆತ್ಮಕಥನದ ಕುರಿತ ವಿಮರ್ಶೆ


No comments:

Post a Comment

ಎತ್ತಿತೋರಿಸಲಾದ ಪೋಸ್ಟ್

ಅನ್ನಮ್ಮ’ಳಿಗೆ ೨೫೦ರ ಹಾಗೂ ಅತಿ.ವಂ.ಪೊತ್ತಕಮೂರಿಗೆ ೫೦ರ ಸ್ಮರಣೆಯ ಸಂಭ್ರಮ

ಬೆಂಗಳೂರಿನ ಉತ್ತರಹಳ್ಳಿಯ ಅನ್ನಮ್ಮನ ಬೆಟ್ಟ, ಅಲ್ಲಿನ ಅನ್ನಮ್ಮಳ ಸಮಾಧಿ, ಆ ಬೆಟ್ಟದ ಮೇಲಿನ ಶಿಲುಬೆ, ಅಲ್ಲಿ ಪ್ರತಿವರ್ಷ ತಪಸ್ಸು ಕಾಲದ ಐದನೇ ಭಾನುವಾರ ನಡೆಯುವ ಯೇಸು...